ಹಾನಿ ಅಂದಾಜಿಗೆ ವಿಮೆ ಪಡೆದವರೂ ಸರ್ವೇಯರ್ ನೇಮಿಸಬಹುದು
* ಈ ಸಂಬಂಧ 2015ರಲ್ಲಿ ಐಆರ್ಡಿಎ ಸುತ್ತೋಲೆ ಹೊರಡಿಸಿದೆ ವಿಮೆ ಪರಿಹಾರ ನೀಡುವುದನ್ನು ತಪ್ಪಿಸಿಕೊಳ್ಳಲು ವಿಮೆ ಕಂಪನಿಗಳು ನಾನಾ ರೀತಿಯ ನೆಪಗಳನ್ನು ಮುಂದೊಡ್ಡುತ್ತವೆ. ಸರ್ವೇಯರ್ ನೇಮಕ ಮಾಡುವುದನ್ನು ವಿಳಂಬ ಮಾಡುತ್ತವೆ. ಆಗ ವಿಮೆ ಪಡೆದವರು ತಾವೇ ಸರ್ವೇಯರನನ್ನು ನೇಮಿಸಬಹುದೆ? ವಿಮೆ ಕಾನೂನು ಈ ಕುರಿತು ಏನು ಹೇಳುತ್ತದೆ? ರಾಷ್ಟ್ರೀಯ ಆಯೋಗದ ವರೆಗೂ ಮೇಲ್ಮನವಿ ಸಲ್ಲಿಸಿ ಮುಖಭಂಗ ಅನುಭವಿಸಿದ ನ್ಯೂ ಇಂಡಿಯಾ ಅಶ್ಯೂ್ರೆನ್ಸ್ ಕಂಪನಿಯ ಪ್ರಕರಣ ಇಲ್ಲಿದೆ. ಇದು ನ್ಯೂ ಇಂಡಿಯಾ ಅಶ್ಯೂ್ರೆನ್ಸ್ ಕಂಪನಿ ಮತ್ತು ದೆಹಲಿಯ ಮೆ.ಡೆಮ್ಮ್ ಅಟೋ ಇಂಜಿನಿಯರಿಂಗ್ ವರ್ಕ್ಸ್ ನಡುವಿನ ವ್ಯಾಜ್ಯ. ಮೆ.ಡೆಮ್ಮ್ ಅಟೋ ಇಂಜಿನಿಯರಿಂಗ್ ವರ್ಕ್ಸ್ ಇವರು 12-10-2006ರಿಂದ 11-10-2007ರ ಅವಧಿಗೆ ಬೆಂಕಿ ಮತ್ತು ಇತರ ಅನಾಹುತಗಳಿಂದ ಆಗುವ ಹಾನಿಯಿಂದ ರಕ್ಷಿಸಿಕೊಳ್ಳಲು 70 ಲಕ್ಷ ರುಪಾಯಿಗೆ ವಿಮೆಯನ್ನು ಪಡೆದುಕೊಂಡಿದ್ದರು. ಇದರ ವ್ಯಾಪ್ತಿಗೆ ಅವರ ಅಂಗಡಿಯಲ್ಲಿಯ ಎಲ್ಲ ಅಟೋ ಸಾಮಗ್ರಿಗಳ ಸಂಗ್ರಹ ಸೇರಿತ್ತು. ಅಂಗಡಿಯ ಸಾಮಾನುಗಳು ಪಂಜಾಬ್ ನ್ಯಾಶನಲ್ ಬ್ಯಾಂಕಿನ ಅಡಮಾನಕ್ಕೆ ಒಳಪಟ್ಟಿತ್ತು. 13-05-2007ರಂದು ರಾತ್ರಿ 9 ಗಂಟೆಗೆ ಈ ವಿಮೆಗೆ ಒಳಪಟ್ಟ ಅಂಗಡಿ ಇದ್ದ ಗುರುನಾನಕ ಮಾರುಕಟ್ಟೆಯಲ್ಲಿ ಭಾರಿ ಪ್ರಮಾಣದ ಬೆಂಕಿ ಅನಾಹುತ ಸಂಭವಿಸಿತು. ಅಗ್ನಿಶಾಮಕ ದಳದವರು ಆಗಮಿಸಿ ಹಲವು ಗಂಟೆಗಳ ಕಾಲ ಶ್ರಮಿಸಿ ಬೆಂಕಿಯನ್ನು ನಂದಿಸಿದರು. ಪೊಲೀಸರಿಗೂ ಸುದ್ದಿ ತಿಳಿಸಲ